
ಸಕಲೇಶಪುರ – ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಭೀಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ವ ಜನಾಂಗದ ಬದುಕಿಗೆ ಬೆಳಕು ನೀಡಿದ ಬುದ್ದ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಗಳೊಂದಿಗೆ ಬಾಳ್ಳುಪೇಟೆಯ ರಾಜ ಬೀದಿಯಲ್ಲಿ ಭವ್ಯ ಮೆರವಣಿಗೆಯ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡು ಗುರಪ್ಪ ವೃತ್ತದಿಂದ ಕೆಂಚಮ್ಮ ಮಲ್ಲೇಗೌಡ ಸಮುದಾಯ ಭವನದವರೆಗೆ ಅಂಬೇಡ್ಕರ್ ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.
