




ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಂದು ಜರುಗಿದ ವಿದ್ಯಾರ್ಥಿ ಕಲಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.ಹೊಸದಾಗಿ ಕಾಲೇಜು ಮೆಟ್ಟಿಲು ಹತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೇ, ವಯೋಸಹಜ ಪ್ರಭಾವಗಳಿಗೆ ಒಳಗಾಗದೇ ತಮ್ಮ ಪಿ.ಯು ಶಿಕ್ಷಣವನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಬೇಕು, ಆ ಮೂಲಕ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಹಾಗೆಯೇ, ಕಲಾ ಸಂಘ – ರಾಷ್ಟ್ರೀಯ ಸೇವಾ ಯೋಜನೆಗಳಂತಹ ಚಟುವಟಿಕೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ಕೋರಲಾಯಿತು.
