
ಸಕಲೇಶಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೆಂಟರ್ ಇಲ್ಲದೆ ರೋಗಿಗಳು ಖಾಸಗಿ ಆಸ್ಪತ್ರೆ ಅಥವಾ ಹಾಸನದ ಜಿಲ್ಲಾ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದ್ದು, ಇದರಿಂದ ರೈತರಿಗೆ ಕೂಲಿ ಕಾರ್ಮಿಕರಿಗೆ ಬಡವರಿಗೆ ಜನಸಾಮಾನ್ಯರಿಗೆ ಸಮಸ್ಯೆ ಎದುರಾಗುತ್ತಿದ್ದು, ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೆಂಟರ್ ತೆರೆಯಬೇಕು ಬಡವರಿಗೆ ಕೂಲಿ ಕಾರ್ಮಿಕರಿಗೆ ರೈತರಿಗೆ ಅನುಕೂಲ ಆಗುವ ಸಲುವಾಗಿ ಇಂದು 10:30 ಕ್ಕೆ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಹೋರಾಟಗಾರ ಯೂನಸ್ ಸಕಲೇಶಪುರ ತಿಳಿಸಿರುತ್ತಾರೆ.
